ಆರ್. ಅಶೋಕ್ ತಮ್ಮ ಪಕ್ಷದ ಒಳಜಗಳ ಸರಿಪಡಿಸಿಕೊಳ್ಳಲಿ: ಪರಮೇಶ್ವರ್

Prasthutha|

ಬೆಂಗಳೂರು: ‘ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೆ ಏಕೆ ಬೇಕು. ಅವರ ಪಕ್ಷದಲ್ಲಿರುವ ಒಳ ಜಗಳಗಳನ್ನು ಸರಿಪಡಿಸಿಕೊಳ್ಳಲಿ’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಗೃಹ ಸಚಿವ ಜಿ. ಪರಮೇಶ್ವರ್ ತಿರುಗೇಟು ನೀಡಿದರು.

- Advertisement -


‘ನಾವೇನು ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ. ಆ ಪಕ್ಷದವರೇ ಬದಲಾವಣೆ ಮಾಡುತ್ತಾರೆ’ ಎಂಬ ಅಶೋಕ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ‘ನಮ್ಮ ಪಕ್ಷವನ್ನು ನಾವು ನೋಡಿಕೊಳ್ಳುತ್ತೇವೆ’ ಎಂದರು.


ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆ ಹುಟ್ಟಿಕೊಳ್ಳುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಗಳಿದ್ದಾರೆ, ಆಡಳಿತ ನಡೆಯುತ್ತಿದೆ. ಕೋರ್ಟ್ ನಲ್ಲಿ ಕೇಸ್ ಇದೆ, ಏನಾಗುತ್ತದೆ ಎಂಬುದನ್ನು ಕಾದು ನೋಡೋಣ’ ಎಂದರು.



Join Whatsapp
Exit mobile version