ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಪದಚ್ಯುತಿ

Prasthutha|

ಬೆಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಲಾಗಿದೆ.

- Advertisement -

“ಶ್ರೀ ರಹೀಂ ಉಚ್ಚಿಲ್ ಅವರನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದೆ’ ಎಂದು ಕನ್ನಡ ಮತ್ತು ಸಾಹಿತ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.

ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿದುಬಂದಿಲ್ಲ.

- Advertisement -

“ಆದೇಶ ನೋಡಿದ ಮೇಲಷ್ಟೇ ತನಗೆ ಮಾಹಿತಿ ಸಿಕ್ಕಿದೆ. ಅಕಾಡಮಿಯ ಅಧ್ಯಕ್ಷರಾಗಿ ಎರಡು ಬಾರಿ ಸೇವೆ ಸಲ್ಲಿಸಿರುವುದು ತೃಪ್ತಿ ತಂದಿದೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp