ರಾಹುಲ್ ಗಾಂಧಿಯ ಕಾರಣ ಕಾಂಗ್ರೆಸ್‌ಗೆ ರಾಹುಕಾಲ ಬಂದಿದೆ: ಆರ್ ಅಶೋಕ್

Prasthutha|

ಕೋಲಾರ: ರಾಹುಲ್ ಗಾಂಧಿ ಇರುವ ಕಾರಣ ಕಾಂಗ್ರೆಸ್‌ಗೆ ರಾಹುಕಾಲ ಬಂದಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

- Advertisement -

ಕೋಲಾರದಲ್ಲಿ ಜಿಲ್ಲಾಡಳಿತ ಕಚೇರಿಯ ಬಳಿ ಜಿಲ್ಲಾ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ವಿದ್ಯುತ್ ಬೆಲೆ, ಡಿಸೇಲ್- ಪೆಟ್ರೋಲ್ ಬೆಲೆ, ಹಾಲಿನ ಬೆಲೆ, ಮದ್ಯದ ಬೆಲೆ, ಮುದ್ರಾಂಕ ನೋಂದಣಿ ಬೆಲೆಗಳನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಜೀವನವು ಆರ್ಥಿಕ ಸಂಕಷ್ಟದಲ್ಲಿರುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ.

ಬೆಲೆ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎರಡು ನಾಲಿಗೆಗಳು ಇವೆ. ಮಾಡಲ್ಲ ಅಂತ ಹೇಳಿದ್ದನ್ನು ಈಗ ಮಾಡುತ್ತಿದ್ದಾರೆ ಮಾತೆತ್ತಿದರೆ ಸಿಎಂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುತ್ತಾರೆ. ಕೇಂದ್ರ ಸರ್ಕಾರ ಏನು ನಿಮ್ಮ ಅತ್ತೆ ಮನೆಯೇ ಎಂದು ಆರ್ ಅಶೋಕ್ ಪ್ರಶ್ನಿಸಿದ್ದಾರೆ.

- Advertisement -

ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್‌ರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯರಿಗೆ ಮಾನ, ಮರ್ಯಾದೆ ಏನಾದರೂ ಇದ್ದಲ್ಲಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬರಲಿ ಎಂದಿದ್ದಾರೆ.

Join Whatsapp
Exit mobile version