ಟ್ರ್ಯಾಕ್ಟರ್ ಏರಿ ಸಂಸತ್ತಿಗೆ ಆಗಮಿಸಿದ ರಾಹುಲ್ ಗಾಂಧಿ| ಕೃಷಿ ಕಾಯ್ದೆ ರದ್ದುಪಡಿಸಲು ಒತ್ತಾಯ

Prasthutha|

ನವದೆಹಲಿ, ಜು.26: ಸೋಮವಾರ ಬೆಳಿಗ್ಗೆ ಸಂಸತ್ತಿಗೆ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬಂದ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ, ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ಒತ್ತಾಯ ಮಾಡಿದರು.

- Advertisement -


ರಾಹುಲ್ ಗಾಂಧಿಯವರ ಜೊತೆಯಲ್ಲಿ ಸಂಸದರಾದ ಪ್ರತಾಪ್ ಸಿಂಗ್ ಬಜ್ವಾ, ರವನೀತ್ ಸಿಂಗ್ ಬಿಟ್ಟು, ದೀಪಿಂದರ್ ಸಿಂಗ್ ಹೂಡಾ ಮೊದಲಾದವರಿದ್ದು ಕೃಷಿ ಕಾಯ್ದೆಗಳ ವಿರುದ್ಧ ಬ್ಯಾನರ್ ಪ್ರದರ್ಶಿಸಿದರು ಹಾಗೂ ಘೋಷಣೆ ಕೂಗಿದರು.


ಈ ಕಾಯ್ದೆಯು ಎರಡು ಮೂರು ಮಂದಿ ಉದ್ಯಮಿಗಳಿಗೆ ಮಾತ್ರ ಉಪಯುಕ್ತವಾಗಿದ್ದು, ರೈತರಿಗೆ ಮಾರಕ ಆಗಿರುವುದರಿಂದ ಕೂಡಲೆ ಅದನ್ನು ರದ್ದು ಪಡಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿ ಮಾತನಾಡಿದರು.

Join Whatsapp