ಕೇದಾರನಾಥದಲ್ಲಿ ರಾಹುಲ್ ಗಾಂಧಿ ಮತ್ತು ವರುಣ್ ಗಾಂಧಿ ಭೇಟಿ: ಪರಸ್ಪರ ಕ್ಷೇಮ ವಿಚಾರಿಸಿದ ಸಹೋದರರು

Prasthutha|

ಉತ್ತರಾಖಂಡ್: ರಾಹುಲ್ ಗಾಂಧಿ ಮತ್ತು ವರುಣ್ ಗಾಂಧಿ ಕೇದಾರನಾಥ ದೇವಸ್ಥಾನದಲ್ಲಿ ಅನಿರೀಕ್ಷಿತವಾಗಿ ಭೇಟಿಯಾಗಿದ್ದಾರೆ. ಪರಸ್ಪರ ಕ್ಷೇಮ ವಿಚಾರಿಸಿ ಸಂತೋಷವನ್ನು ವಿನಿಮಯ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಕೇದಾರನಾಥ ದೇವಾಲಯದಿಂದ ಹೊರ ಹೋಗಯತ್ತಿರುವ ಸಮಯದಲ್ಲಿ ವರುಣ್ ಗಾಂಧಿ ಕುಟುಂಬದೊಂದಿಗೆ ಅಲ್ಲಿಗೆ ತಲುಪಿದ್ದಾರೆ.

- Advertisement -

ವರುಣ್ ಪುತ್ರಿ ಅನುಸೂಯಾರನ್ನು ಮಾತನಾಡಿಸಿದ ರಾಹುಲ್ ಗಾಂಧಿ ತುಂಬಾ ಸಂತೋಷಪಟ್ಟರು ಎಂದು ವರದಿಗಳು ತಿಳಿಸಿವೆ. ವರುಣ್ ಗಾಂಧಿ ತಮ್ಮ ಕ್ಷೇತ್ರವಾದ ಪಿಲಿಭಿತ್‌ನಲ್ಲಿ ಸಕ್ರಿಯವಾಗಿದ್ದರೂ ಪಕ್ಷದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿಲ್ಲವಾದ್ದರಿಂದ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ನಡೆದ ಈ ಸಂತಸದ ವಿನಿಮಯವು ರಾಜಕೀಯ ಊಹಾಪೋಹಗಳನ್ನು ಹುಟ್ಟುಹಾಕಿದೆ.

ಈ ವರ್ಷದ ಆರಂಭದಲ್ಲಿ, ರಾಹುಲ್ ಗಾಂಧಿ ಅವರು ತಮ್ಮ ಭಾರತ್ ಜೋಡೋ ಯಾತ್ರೆಯನ್ನು ಮಾಡುತ್ತಿದ್ದಾಗ, ಭಾರತ್ ಜೋಡೋ ನಡಿಗೆಗೆ ವರುಣ್ ಗಾಂಧಿ ಅವರನ್ನು ಸ್ವಾಗತಿಸುತ್ತೀರಾ ಎಂದು ಕೇಳಲಾಯಿತು. ಆ ಸಮಯದಲ್ಲಿ ಅವರು ತಮ್ಮ ಸೋದರಸಂಬಂಧಿಯನ್ನು ಪ್ರೀತಿಯಿಂದ ಭೇಟಿಯಾಗಬಹುದು ಮತ್ತು ಅಪ್ಪಿಕೊಳ್ಳಬಹುದು ಆದರೆ ನಮ್ಮಿಬ್ಬರ ಸಿದ್ಧಾಂತಗಳು ಬೇರೆ ಬೇರೆ ಎಂದಿದ್ದರು.

- Advertisement -



Join Whatsapp