ಜೈ ಶ್ರೀರಾಮ್ ಹೇಳುವಂತೆ ಮುಸ್ಲಿಂ ವೃದ್ಧನಿಗೆ ಥಳಿತ | ರಾಹುಲ್ ಗಾಂಧಿ ಖಂಡನೆ

Prasthutha|

►ಇದು ಸಮಾಜ ಮತ್ತು ಧರ್ಮಕ್ಕೆ ನಾಚಿಕೆಗೇಡಿನ ಸಂಗತಿ ಎಂದ ಕಾಂಗ್ರೆಸ್ ಮುಖಂಡ

ಹೊಸದಿಲ್ಲಿ : ಉತ್ತರಪ್ರದೇಶದ ಗಾಝಿಯಾಬಾದ್‌ನಲ್ಲಿ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಕೇಳಿ ಮುಸ್ಲಿಂ ವೃದ್ಧರೊಬ್ಬರನ್ನು ಥಳಿಸಿದ ಘಟನೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದು, ಇಂತಹ ಕ್ರೌರ್ಯ ಸಮಾಜ ಮತ್ತು ಧರ್ಮ ಎರಡಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಭಗವಾನ್ ರಾಮನ ನಿಜವಾದ ಭಕ್ತನು ಅಂತಹ ಕೆಲಸವನ್ನು ಮಾಡುತ್ತಾನೆ ಎಂಬುದನ್ನು ನಾನು ಒಪ್ಪಿಕೊಳ್ಳುವುದಿಲ್ಲ, ಇಂತಹ ಕ್ರೌರ್ಯವನ್ನು ಮಾನವೀಯತೆಯಿಂದ ದೂರವಿಡಬೇಕಾಗಿದೆ. ಈ ಘಟನೆಯು ಸಮಾಜ ಮತ್ತು ಧರ್ಮ ಎರಡಕ್ಕೂ ನಾಚಿಕೆಗೇಡಿನ ಸಂಗತಿ’ ಎಂದಿದ್ದಾರೆ.

ಮುಸ್ಲಿಂ ವೃದ್ಧರೊಬ್ಬರನ್ನು ನಾಲ್ಕು ಮಂದಿ ಥಳಿಸಿ, ಗಡ್ಡ ಕತ್ತರಿಸಿ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಒತ್ತಾಯಿಸಿದ್ದು, ಈ ಘಟನೆಯಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಿಸಿ ಪರ್ವೇಶ್ ಗುರ್ಜರ್ ಎಂಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಗಾಝಿಯಾಬಾದ್ ಪೊಲೀಸರು ತಿಳಿಸಿದ್ದಾರೆ .

Join Whatsapp