ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಆರಂಭ: ಶಾಲಾ-ಕಾಲೇಜುಗಳಿಗೆ ರಜೆ

Prasthutha|

ಬಳ್ಳಾರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ನಿನ್ನೆ ಸಂಜೆ ಬಳ್ಳಾರಿ ಜಿಲ್ಲೆಗೆ ಆಗಮಿಸಿದ್ದು, ಇಂದು ಬೆಳಗ್ಗೆ ಹಲಕುಂದಿ ಮಠದಿಂದ ಯಾತ್ರೆ ಆರಂಭಿಸಿದ್ದಾರೆ.

- Advertisement -


ಬೆಳಗ್ಗೆ 10ಕ್ಕೆ ಯಾತ್ರೆ ಬಳ್ಳಾರಿ ನಗರಕ್ಕೆ ತಲುಪಿದೆ, ಮಧ್ಯಾಹ್ನ 1.30ಕ್ಕೆ ಬಳ್ಳಾರಿ ಮುನ್ಸಿಪಲ್ ಮೈದಾನದಲ್ಲಿ ರಾಹುಲ್ ಗಾಂಧಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಪಾದಯಾತ್ರೆ ನಂತರ ರಾತ್ರಿ ರಾಹುಲ್ ಗಾಂಧಿ ಬಳ್ಳಾರಿಯ ಸಂಗನಕಲ್ಲು ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.


ಬಳ್ಳಾರಿಯಲ್ಲಿ ಜೋಡೋ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್ ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.

Join Whatsapp