ವಯನಾಡಿಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಪ್ರಿಯಾಂಕಾ

Prasthutha|

ವಯನಾಡು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಭೂಕುಸಿತ ಸಂಭವಿಸಿದ ವಯನಾಡಿನ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿದ್ದಾರೆ.

- Advertisement -


ಗುರುವಾರ ಬೆಳಿಗ್ಗೆ ಕಣ್ಣೂರಿಗೆ ಬಂದಿಳಿದ ರಾಹುಲ್ ಹಾಗೂ ಪ್ರಿಯಾಂಕಾ ವಿವಿಧ ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ.


ಈ ಕುರಿತು ಕಾಂಗ್ರೆಸ್ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ‘ದುರಂತ ಸಂಭವಿಸಿದ ವಯನಾಡಿನ ಮೇಪ್ಪಾಡಿಗೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ತಲುಪಿದ್ದು, ಅಲ್ಲಿಯ ಸಂತ್ರಸ್ತರನ್ನು ಭೇಟಿಯಾಗಿದ್ದಾರೆ’ ಎಂದು ಬರೆದುಕೊಂಡಿದೆ.

- Advertisement -


ಜುಲೈ 30 ರಂದು ಮುಂಡಕ್ಕೈ, ಚೂರಲ್ ಮಲ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 250 ದಾಟಿದೆ.



Join Whatsapp