ಸಂಸತ್‌ ಉದ್ಘಾಟನೆಯನ್ನು ಪ್ರಧಾನಿ ತಮ್ಮ ಪಟ್ಟಾಭಿಷೇಕ ಎಂದು ಭಾವಿಸಿದ್ದಾರೆ: ರಾಹುಲ್ ಗಾಂಧಿ

Prasthutha|

ಹೊಸದಿಲ್ಲಿ: ನೂತನ ಸಂಸತ್‌ ಭವನ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಪಟ್ಟಾಭಿಷೇಕ ಎಂದು ಭಾವಿಸಿದ್ದಾರೆಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, ಸಂಸತ್‌ ಜನರ ಧ್ವನಿ. ಸಂಸತ್ ಭವನದ ಉದ್ಘಾಟನೆಯನ್ನು ಪ್ರಧಾನಿ ಮಹಾಮಸ್ತಕಾಭಿಷೇಕ ಎಂದು ಭಾವಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಹೊಸ ಸಂಸತ್‌ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾದ ಕುಸ್ತಿಪಟುಗಳ ಬಂಧನ ಖಂಡಿಸಿ ಟ್ವೀಟ್‌ ಮಾಡಿರುವ ಅವರು, ಪಟ್ಟಾಭಿಷೇಕ ಮುಗಿಯಿತು. ಬೀದಿಗಿಳಿದು ಪ್ರತಿಭಟಿಸುವ ಸಾರ್ವಜನಿಕರ ದನಿಯನ್ನು ತುಳಿಯುತ್ತಿರುವ ‘ಅಹಂಕಾರಿ ರಾಜ’ ಎಂದು ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Join Whatsapp