ಜನರ ಜ್ವಲಂತ ಸಮಸ್ಯೆ ಎತ್ತಿರೋ ರಾಹುಲ್ ಗಾಂಧಿ ಪ್ರತಿಪಕ್ಷ ನಾಯಕನಾಗಲಿ: ಪರಮೇಶ್ವರ್

Prasthutha|

ಬೆಂಗಳೂರು: ದೇಶಾದ್ಯಂತ ಪಾದಯಾತ್ರೆ ಮಾಡಿ ಜನರ ಜ್ವಲಂತ ಸಮಸ್ಯೆ ಎತ್ತಿರೋ ರಾಹುಲ್ ಗಾಂಧಿ ಪ್ರತಿಪಕ್ಷ ನಾಯನಕನಾಗಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

- Advertisement -

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಅವರೇ ಪ್ರತಿಪಕ್ಷ ಆಗಲಿ ಅಂತ ನಮ್ಮೆಲ್ಲರ ಆಸೆ. ಇದನ್ನು ಇಂಡಿಯಾ ಒಕ್ಕೂಟ ತೀರ್ಮಾನಿಸಲಿದೆ. ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಮಾಡಿದ್ದಾರೆ. ಈ ಮೂಲಕ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿದ್ದಾರೆ. ಹೀಗಾಗಿ ಅವರೇ ಪ್ರತಿಪಕ್ಷ ನಾಯಕ ಆಗಲಿ ಅನ್ನೋದು ನಮ್ಮೆಲ್ಲರ ಬಯಕೆಯಾಗಿದೆ. ಇಂಡಿಯಾ ಕೂಟ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದು ಹೇಳಿದರು.



Join Whatsapp