ಸಿದ್ದರಾಮಯ್ಯರನ್ನು ಕೆಳಗಿಳಿಸಲು ರಾಹುಲ್ ಗಾಂಧಿ ಕಾಯುತ್ತಿದ್ದಾರೆ: ಜನಾರ್ದನ ರೆಡ್ಡಿ

Prasthutha|

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ರಾಹುಲ್ ಗಾಂಧಿ ಕಾಯುತ್ತಿದ್ದಾರೆ. ಅವರಿಗೆ ಡಿ.ಕೆ.ಶಿವಕುಮಾರ್ ಅವರಂತಹ ಮುಖ್ಯಮಂತ್ರಿಗಳು ಬೇಕಾಗಿದ್ದಾರೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

- Advertisement -

ಕೊಪ್ಪಳದ ಹ್ಯಾಟಿ ಮುಂಡರಗಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ರೆಡ್ಡಿ, ಕಾಂಗ್ರೆಸ್ ಹೈಕಮಾಂಡ್‌ಗೆ ದುಡ್ಡು ಕೊಡುವ ಸಿಎಂ ಬೇಕಾಗಿದ್ದಾರೆ. ಅದಕ್ಕಾಗಿ‌ ಸಿದ್ದರಾಮಯ್ಯರನ್ನು ರಾಹುಲ್ ಕೆಳಗಿಳಿಸಲಿದ್ದಾರೆ ಎಂದಿದ್ದಾರೆ.

ಸಿದ್ದರಾಮಯ್ಯ ಯಾರ ಬಳಿಯೂ ದುಡ್ಡು ತೆಗೆದುಕೊಳ್ಳಲ್ಲ, ಯಾರಿಗೂ ಕೂದ ದುಡ್ಡು ಕೊಡಲ್ಲ ಎಂದು ಸಿಎಂನ್ನು ಹೊಗಳಿದ ಜನಾರ್ದನ ರೆಡ್ಡಿ, ಆದರೆ ಕಾಂಗ್ರೆಸ್ ಹೈಕಮಾಂಡ್ ಗೆ ದುಡ್ಡು ಕೊಡುವ ಸಿಎಂ ಬೇಕಾಗಿದ್ದಾರೆ. ಅವರಿಗೆ ಡಿ.ಕೆ.ಶಿವಕುಮಾರ್ ಅವರಂತಹ ಮುಖ್ಯಮಂತ್ರಿಗಳು ಬೇಕಾಗಿದ್ದಾರೆ. ಅದಕ್ಕೆ ಡಿ.ಕೆ.ಶಿವಕುಮಾರ್ ರನ್ನು ಸಿಎಂ ಮಾಡಲು ರಾಹುಲ್ ಗಾಂಧಿ ಕಾಯುತ್ತಿದ್ದಾರೆ. ಮಂಡ್ಯದಲ್ಲಿ ನಡೆದ ಸಮಾವೇಶದಲ್ಲೇ ರಾಹುಲ್ ಗಾಂಧಿ ಈ ಸಂದೇಶ ರವಾನಿಸಿದ್ದಾರೆ ಎಂದೂ ಹೇಳಿದ್ದಾರೆ.

Join Whatsapp