ರಾಹುಲ್ ಅಮೇಥಿಯಂತೆ ವಯನಾಡಿನಲ್ಲೂ ತನ್ನ ನೆಲೆ ಕಳೆದುಕೊಳ್ಳಲಿದ್ದಾರೆ: ಪ್ರಧಾನಿ ಮೋದಿ

Prasthutha|

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮೇಠಿ ಲೋಕಸಭೆ ಕ್ಷೇತ್ರದಿಂದ ತೆರಳಿದಂತೆ ವಯನಾಡಿನಿಂದಲೂ ಹೊರನಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

- Advertisement -


ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ನಾಂದೇಡ್ನಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಮೋದಿ, ‘ಕಾಂಗ್ರೆಸ್ ಯುವರಾಜ ಬೇರೆ ದಾರಿಯಿಲ್ಲದೆ ವಯನಾಡಿನಿಂದ ಕಣಕ್ಕಿಳಿದಿದ್ದಾರೆ. ಆದರೆ, ಅವರು ಅಮೇಠಿಯಿಂದ ಹೊರನಡೆದಂತೆ ವಯನಾಡ್ನಿಂದಲೂ ತೆರಳಲಿದ್ದಾರೆ’ ಎಂದು ಕಿಚಾಯಿಸಿದ್ದಾರೆ.


ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ಮೈತ್ರಿಕೂಟ ‘ಐಎನ್ಡಿಐಎ–ಇಂಡಿಯಾ’ ವಿರುದ್ಧವೂ ಗುಡುಗಿದ್ದಾರೆ. ಲೋಕಸಭೆಗೆ ಮೊದಲ ಹಂತದಲ್ಲಿ ಶುಕ್ರವಾರ ನಡೆದ ಮತದಾನದ ವೇಳೆ, ಜನರು ಕಾಂಗ್ರೆಸ್ ಹಾಗೂ ‘ಐಎನ್ಡಿಐಎ–ಇಂಡಿಯಾ’ ಮೈತ್ರಿಕೂಟವನ್ನು ತಿರಸ್ಕರಿಸಿದ್ದಾರೆ. ‘ವಿಕಸಿತ ಭಾರತ’ ನಿರ್ಮಾಣಕ್ಕಾಗಿ ಬಿಜೆಪಿ ನೇತೃತ್ವದ ಎನ್ಡಿಎ ಅನ್ನು ಬೆಂಬಲಿಸಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.

Join Whatsapp