Home ಟಾಪ್ ಸುದ್ದಿಗಳು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಫಲಿತಾಂಶವನ್ನೇ ಬದಲಿಸಲಿದೆ: ಉ.ಪ್ರ ಕಾಂಗ್ರೆಸ್ ಅಧ್ಯಕ್ಷ

ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಫಲಿತಾಂಶವನ್ನೇ ಬದಲಿಸಲಿದೆ: ಉ.ಪ್ರ ಕಾಂಗ್ರೆಸ್ ಅಧ್ಯಕ್ಷ

ವಾರಾಣಸಿ: ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡುತ್ತಿರುವುದು ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಹುಲ್ ಗಾಂಧಿಯವರು ಉತ್ತರ ಪ್ರದೇಶದಿಂದಲೇ ಸ್ಪರ್ಧೆ ಮಾಡಬೇಕು ಎನ್ನುವುದು ನಮ್ಮ ಬೇಡಿಕೆಯಾಗಿತ್ತು. ರಾಯ್ ಬರೇಲಿ ಹಾಗೂ ಅಮೇಠಿಯಿಂದ ಗಾಂಧಿ ಕುಟುಂಬದವರು ಸ್ಪರ್ಧೆ ಮಾಡಬೇಕು ಎಂದು ನಾವು ಬಯಸಿದ್ದೇವು ಎಂದು ಹೇಳಿದ್ದಾರೆ.


ರಾಹುಲ್ ಗಾಂಧಿಯವರ ಸ್ಪರ್ಧೆ ಇಡೀ ಚುನಾವಣೆಯ ಫಲಿತಾಂಶವನ್ನೇ ಬದಲಿಸಲಿದೆ. ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸುವುದು ಖಚಿತ. ರಾಹುಲ್ ಗಾಂಧಿ ಓಬ್ಬ ಹೋರಾಟಗಾರ. ಅವರನ್ನು ಹಿಂಸೆ ಸರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Join Whatsapp
Exit mobile version