ರಾಹುಲ್ ಗಾಂಧಿ ಹೇಳಿಕೆ ನಮ್ಮ ನಡುವಿನ ಬಿರುಕಿಗೆ ಕಾರಣವಾಗಬಹುದು: ಸಂಜಯ್ ರಾವತ್

Prasthutha|

ನವದೆಹಲಿ: ಸಾವರ್ಕರ್ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಯು ಮಹಾ ವಿಕಾಸ್ ಅಘಾಡಿ ಮೈತ್ರಿ ಬಿರುಕಿಗೆ ಕಾರಣವಾಗಬಹುದು ಎಂದು ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

- Advertisement -


ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಾವರ್ಕರ್ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಯು ಕಹಿಯನ್ನು ಉಂಟುಮಾಡುತ್ತದೆ. ಭಾರತ್ ಜೋಡೋ ಯಾತ್ರೆ ಮೂಲಕ ಉತ್ತಮ ಕೆಲಸ ಮಾಡುತ್ತಿರುವ ಅವರು ಸಾವರ್ಕರ್ ವಿಷಯ ತೆಗೆಯುವ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.


ದೇಶದ ಇತರ ಭಾಗಗಳಿಗೆ ಹೋಲಿಸಿದರೆ ಮಹಾರಾಷ್ಟ್ರದಲ್ಲಿ ರಾಹುಲ್ ಅವರ ಭಾರತ್ ಜೋಡೋ ಯಾತ್ರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅವರ ಯಾತ್ರೆಯು ದೇಶದಲ್ಲಿ ನಡೆಯುತ್ತಿರುವ ದ್ವೇಷವನ್ನು ಕೊನೆಗೊಳಿಸಲು ಮತ್ತು ಏರುತ್ತಿರುವ ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಧ್ವನಿ ಎತ್ತುವ ಗುರಿಯನ್ನು ಹೊಂದಿದೆ. ಅವರು ಈ ಸಮಸ್ಯೆಗಳ ಚರ್ಚೆಯನ್ನು ಸರಿಯಾಗಿ ಮುನ್ನೆಲೆಗೆ ತಂದಿದ್ದಾರೆ ಎಂದು ಹೇಳಿದ್ದಾರೆ. ಆದರೆ ಸಾವರ್ಕರ್ ಕುರಿತ ರಾಹುಲ್ ಅಭಿಪ್ರಾಯಕ್ಕೆ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದಾರೆ.

Join Whatsapp