ರಾಯಚೂರು: ಲಕ್ಷಾಂತರ ರೂ. ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಾಗಾಟ !

Prasthutha|

ರಾಯಚೂರು: ಲಕ್ಷಾಂತರ ರೂಪಾಯಿಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಮುದಗಲ್ ಪಟ್ಟಣದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಅಕ್ಕಿಯನ್ನು ಜಪ್ಪಿ ಮಾಡಿದ್ದಾರೆ.

- Advertisement -

ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಅಂಕಲಿಮಠ ಕ್ರಾಸ್ ಬಳಿ ದಾಳಿ ನಡೆಸಿದ ಮುದಗಲ್ ಠಾಣೆ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ 5.92 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ. ಸುಮಾರು 5.92 ಲಕ್ಷ ಮೌಲ್ಯದ 296 ಕ್ವಿಂಟಾಲ್ನಟ 605 ಅಕ್ಕಿ ಮೂಟೆಗಳನ್ನು ಅಧಿಕಾರಿಗಳು ಜಪ್ತಿಗೊಳಿಸಿದ್ದಾರೆ.

ಆರೋಪಿ ನಾಗೇಶ್ ವಿರೂಪಾಕ್ಷ ಗೌಡ ಪಡಿತರದಾರರಿಂದಲೇ ಪಡಿತರ ಅಕ್ಕಿ ಖರೀದಿ ಮಾಡಿದ್ದ ಬಳಿಕ ಮಣಿಕಂಠ ಎಂಬುವವರಿಗೆ ಒಂದು ಲೋಡ್ ಮರಾಟ ಮಾಡಲು ಮುಂದಾಗಿದ್ದ. ಈ ವೇಳೆ ದಾಳಿ ನಡೆಸಿದ್ದ ಪೊಲೀಸರು ಪಡಿತರ ಅಕ್ಕಿ ದಂಧೆ ನಡೆಸುತ್ತಿದ್ದ ನಾಗೇಶ್ನಿನ್ನು ಬಂಧಿಸಿದ್ದಾರೆ, ಪೊಲೀಸರ ಮುಂದೆ ನಾಗೇಶ್ ತಪ್ಪೊಪ್ಪಿಕೊಂಡಿದ್ದು, ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



Join Whatsapp