Home ಟಾಪ್ ಸುದ್ದಿಗಳು ಮಳೆ, ಪ್ರವಾಹ | ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ: ಜೆಡಿಎಸ್ ಆಕ್ರೋಶ

ಮಳೆ, ಪ್ರವಾಹ | ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ: ಜೆಡಿಎಸ್ ಆಕ್ರೋಶ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ, ಪ್ರವಾಹದಿಂದ ಮನೆ, ಜನ ಜಾನುವಾರುಗಳು ನೀರಿನಲ್ಲಿ ಮುಳುಗುತ್ತಿದ್ದರೆ, ಕಾಂಗ್ರೆಸ್ ಸರ್ಕಾರ ಮಾತ್ರ ಹಗರಣಗಳಲ್ಲಿ ಮುಳುಗಿದೆ ಎಂದು ಜೆಡಿಎಸ್ ರಾಜ್ಯ ಘಟಕ ಆಕ್ರೋಶ ವ್ಯಕ್ತಪಡಿಸಿದೆ.


ಈ ಕುರಿತು ಸೋಮವಾರ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ‘ಕರಾವಳಿ, ಮಲೆನಾಡು, ಬಯಲುಸೀಮೆಯ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಗುಡ್ಡಗಳ ಕುಸಿತ, ಸೇತುವೆಗಳ ಮುಳುಗಡೆ, ಮನೆಗಳ ಕುಸಿತದಿಂದ ಜೀವ ಹಾನಿಯಾಗಿದೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದು, ಊಟ, ವಸತಿಯಿಲ್ಲದೇ ನರಕ ಅನುಭವಿಸುತ್ತಿದ್ದಾರೆ. ಆದರೆ, ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಿ, ಸಾಂತ್ವನ, ಪರಿಹಾರ ಒದಗಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರುಗಳು ಕಾಣೆಯಾಗಿದ್ದಾರೆ‘ ಎಂದು ಲೇವಡಿ ಮಾಡಿದೆ.

Join Whatsapp
Exit mobile version