ಮಳೆಹಾನಿ: ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು:  ಭಾರಿ ಮಳೆಗೆ ಬೆಂಗಳೂರು ತತ್ತರಿಸಿದ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಅಧಿಕಾರಿಗಳ ಸಭೆ ನಡೆಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಸಿಎಂ ಬೊಮ್ಮಾಯಿ ಕೆಲವು ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ರಾಜಕಾಲುವೆಗಳಲ್ಲಿ ಹೂಳು ತೆಗೆಯದ ಹಿನ್ನೆಲೆಯಲ್ಲಿ ಸಭೆಯಲ್ಲಿ ಬಿಬಿಎಂಪಿ ರಾಜಕಾಲುವೆ ವಿಭಾಗದ ಚೀಫ್ ಎಂಜಿನಿಯರ್ ಸುಗುಣಾ ಅವರ ಮೇಲೆ ಸಿಎಂ ಗರಂ ಆಗಿದ್ದು, ಅವರನ್ನು ಎತ್ತಂಗಡಿ ಮಾಡುವಂತೆ ಸಭೆಯಲ್ಲೇ ಸೂಚಿಸಿದ್ದಾರೆ.

ಇದೇ ವೇಳೆ 1500 ಕೋಟಿ ಹಣ ರಿಲೀಸ್ ಮಾಡಿದ್ದೇವೆ, ಆದರೂ ರಾಜಕಾಲುವೆ ಸಮಸ್ಯೆ ಇತ್ಯರ್ಥ ಆಗಿಲ್ಲ ಎಂದು ಸುಗುಣ  ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp