ಮಸೀದಿಗಳ ಧ್ವನಿವರ್ಧಕ ತೆಗೆಯದಿದ್ದರೆ ಮಸೀದಿ ಮುಂದೆ ಹನುಮಾನ್ ಚಾಲೀಸಾ ಹಾಕುವ ಬೆದರಿಕೆ ಒಡ್ಡಿದ ರಾಜ್ ಠಾಕ್ರೆ

Prasthutha|

ಮಹಾರಾಷ್ಟ್ರ: ಮಸೀದಿಗಳ ಧ್ವನಿವರ್ಧಕ ತೆಗೆಯದಿದ್ದರೆ ಮಸೀದಿ ಮುಂದೆ ಹನುಮಾನ್ ಚಾಲೀಸಾ ಹಾಕುವ ಬೆದರಿಕೆಯನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಒಡ್ಡಿದ್ದಾರೆ.

- Advertisement -

ಮಸೀದಿಯ ಧ್ವನಿವರ್ಧಕಗಳ ಬಗ್ಗೆ ಮಾತನಾಡಿರುವ ರಾಜ್ ಠಾಕ್ರೆ, ಪ್ರಾರ್ಥನೆಗೆ ನಾನೆಂದೂ ವಿರೋಧಿಯಲ್ಲ, ನಿಮ್ಮ ಮನೆಯಲ್ಲಿ ಪ್ರಾರ್ಥನೆ ಮಾಡಿಕೊಳ್ಳಿ, ಆದರೆ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು. ನಾನು ಈಗ ಎಚ್ಚರಿಕೆ ನೀಡುತ್ತಿದ್ದೇನೆ. ಧ್ವನಿವರ್ಧಕಗಳನ್ನು ತೆಗೆದುಹಾಕಿ ಇಲ್ಲದಿದ್ದರೆ ಮಸೀದಿಯ ಮುಂದೆ ಧ್ವನಿವರ್ಧಕಗಳನ್ನು ಅಳವಡಿಸಿ ಹನುಮಾನ್ ಚಾಲೀಸಾವನ್ನು ಹಾಕುತ್ತೇವೆ” ಎಂದು ಬೆದರಿಸಿದ್ದಾರೆ.

ಅಲ್ಲದೇ ಮುಂಬೈನ ಮಸೀದಿಗಳ ಬಳಿ ಇರುವ ಜನರು ಪಾಕಿಸ್ಥಾನ ಬೆಂಬಲಿಗರಾಗಿದ್ದು, ಅವರ ಮಸೀದಿಗಳ ಮೇಲೆ ದಾಳಿ ನಡೆಸುವಂತೆ ಪ್ರಧಾನಿ ಮೋದಿಗೆ ರಾಜ್ ಠಾಕ್ರೆ ಕೋರಿಕೊಂಡಿದ್ದಾರೆ.

Join Whatsapp