Home ಟಾಪ್ ಸುದ್ದಿಗಳು ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ವ್ಯಾಪಕ ಪ್ರತಿಭಟನೆ ಹಿನ್ನೆಲೆ ರಾಜಾ ಸಿಂಗ್ ಮತ್ತೆ ಬಂಧನ

ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ವ್ಯಾಪಕ ಪ್ರತಿಭಟನೆ ಹಿನ್ನೆಲೆ ರಾಜಾ ಸಿಂಗ್ ಮತ್ತೆ ಬಂಧನ

ಹೈದರಾಬಾದ್: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಕ್ಷದಿಂದ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಶಾಸಕ ಟಿ ರಾಜಾ ಸಿಂಗ್ ಅವರನ್ನು ವ್ಯಾಪಕ ಪ್ರತಿಭಟನೆ ಹಿನ್ನೆಲೆಯಲ್ಲಿ ತೆಲಂಗಾಣ ಪೊಲೀಸರು ಗುರುವಾರ ಹೈದರಾಬಾದ್ ನ ಅವರ ನಿವಾಸದಿಂದ ಮತ್ತೆ ಬಂಧಿಸಿದ್ದಾರೆ.

ಪ್ರವಾದಿ ಕುರಿತು ಅವರು ಆಡಿರುವ ವೀಡಿಯೋ ವೈರಲ್ ಆಗುತ್ತಿದ್ದಂತೆ ಶಾಸಕನ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಅದರ ಬೆನ್ನಲ್ಲೇ ಅವರನ್ನು ಮಂಗಳವಾರ ಬೆಳಿಗ್ಗೆ ಬಂಧಿಸಿ , ಸಂಜೆ ಬಿಡುಗಡೆ ಮಾಡಲಾಗಿತ್ತು.

ಅವರ ಬಂಧನಕ್ಕೆ ಆಗ್ರಹಿಸಿ ಹೈದರಾಬಾದ್ ನ ಹಳೆ ನಗರದಲ್ಲಿ ಮತ್ತೆ ಪ್ರತಿಭಟನೆ ತೀವ್ರಗೊಂಡು ಪೊಲೀಸರು ಮತ್ತು ಪ್ರತಿಭಟನಕಾರರೊಂದಿಗೆ ತೀವ್ರ ಘರ್ಷಣೆಯುಂಟಾಗಿ ಲಾಠಿ ಚಾರ್ಜ್ ಕೂಡ ನಡೆದಿತ್ತು.

ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ), 295 ಮತ್ತು 505 ರ ಅಡಿಯಲ್ಲಿ ದಬೀರ್ಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version