ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಪೂರ್ಣ ಒಗ್ಗಟ್ಟು: ಸಚಿನ್‌ ಪೈಲಟ್

Prasthutha|

ಹೊಸದಿಲ್ಲಿ: ರಾಜಸ್ಥಾನದಲ್ಲಿ ಕಾಂಗ್ರೆಸ್‌ ಪಕ್ಷ ಪೂರ್ಣ ಒಗ್ಗಟ್ಟಾಗಿದೆ. ಭಾರತ್‌ ಜೋಡೊ ಯಾತ್ರೆಯನ್ನು ಪೂರ್ಣವಾಗಿ ಯಶಸ್ಸುಗೊಳಿಸಲು ಗಮನವನ್ನು ಕೇಂದ್ರೀಕರಿಸಲಾಗಿದೆ ಎಂದು ಕಾಂಗ್ರೆಸ್‌ ನಾಯಕ ಸಚಿನ್ ಪೈಲಟ್‌ ಸ್ಪಷ್ಟಪಡಿಸಿದ್ದಾರೆ.

- Advertisement -

ಕಾಂಗ್ರೆಸ್‌ ನಾಯಕನ ಹೇಳಿಕೆ ರಾಜಸ್ಥಾನದಲ್ಲಿ ಪಕ್ಷದ ಆಂತರಿಕ ಭಿನ್ನಮತ ‘ಭಾರತ್‌ ಜೋಡೋ’ ಯಾತ್ರೆಯ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕವನ್ನು ದೂರ ಮಾಡಿದೆ.

‘ತಮ್ಮ ಮತ್ತು ಮುಖ್ಯಮಂತ್ರಿ ನಡುವಣ ಭಿನ್ನಾಭಿಪ್ರಾಯದ ಲಾಭ ಪಡೆಯಲು ಬಿಜೆಪಿ ಹವಣಿಸಿತ್ತು. ವಾಸ್ತವವಾಗಿ ಬಿಜೆಪಿಯಲ್ಲಿಯೇ ಸಾಕಷ್ಟು ಭಿನ್ನಮತವಿದೆ. ಆ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕನಿಷ್ಠ 12 ಜನ ಕಣ್ಣಿಟ್ಟಿದ್ದಾರೆ’ ಎಂದರು.

- Advertisement -

ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೊ ಯಾತ್ರೆಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಪೂರ್ಣ ಒಗ್ಗಟ್ಟಿದೆ. ಅದರ ಪೂರ್ಣ ಯಶಸ್ಸಿಗೆ ನಾವು ಸಜ್ಜಾಗಿದ್ದೇವೆ. ಒಂದು ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Join Whatsapp