ರಾಜಸ್ಥಾನ: ರಾಹುಲ್ ಗಾಂಧಿ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ

Prasthutha|

ಜೈಪುರ: ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆಯ ನಾಲ್ಕನೇ ದಿನವಾದ ಗುರುವಾರ ಯುವಕನೋರ್ವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅನಂತಪುರ ಪ್ರದೇಶದ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.

- Advertisement -


ಗುರುವಾರ ಬೆಳಗ್ಗೆ ರಾಹುಲ್ ಗಾಂಧಿ ಅವರು ರಾಜೀವ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಹೋಗುತ್ತಿದ್ದ ವೇಳೆ ವೇದಿಕೆ ಪಕ್ಕದಲ್ಲೇ ಇದ್ದ ಯುವಕ ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.


ಯುವಕ ಮೂರು ಜೊತೆ ಬಟ್ಟೆ ಧರಿಸಿಕೊಂಡಿದ್ದು, ಪಕ್ಕದಲ್ಲಿದ್ದವರು ತಕ್ಷಣ ಬೆಂಕಿ ನಂದಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಆ್ಯಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಸಿಐಡಿ ಗುಪ್ತಚರ ದಳದವರು ಕೂಡ ಆಸ್ಪತ್ರೆಗೆ ತೆರಳಿದ್ದು, ಯುವಕನನ್ನು ವಶಕ್ಕೆ ಪಡೆದಿದ್ದಾರೆ.

Join Whatsapp