ರಾಜ್ಯಸಭಾ ಉಪಚುನಾವಣೆ | ಬಿಜೆಪಿ ಅಭ್ಯರ್ಥಿ ಡಾ. ಕೆ. ನಾರಾಯಣ ನಾಮಪತ್ರ ಸಲ್ಲಿಕೆ

Prasthutha|

ಬೆಂಗಳೂರು : ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಸ್ಥಾನಕ್ಕೆ ಡಿ.1ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಕೆ. ನಾರಾಯಣ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.

- Advertisement -

ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣ ಗೌಡ, ಶಾಸಕರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

- Advertisement -

ಡಾ. ನಾರಾಯಣ ಅವರು ಮುದ್ರಣ ಉದ್ಯಮದಲ್ಲಿ ನಿರತರಾಗಿರುವವರು. ಬಿಜೆಪಿಯ ಸಹ ಸಂಘಟನೆಗಳ ನಂಟಿದ್ದ ಡಾ. ನಾರಾಯಣ ಅವರಿಗೆ ಇದೀಗ ರಾಜ್ಯಸಭಾ ಸದಸ್ಯರಾಗುವ ಅವಕಾಶ ದೊರಕಿದೆ.

Join Whatsapp