Home ಟಾಪ್ ಸುದ್ದಿಗಳು ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಲಾಟೆ: ನಾಲ್ವರಿಗೆ ಹಲ್ಲೆ

ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಲಾಟೆ: ನಾಲ್ವರಿಗೆ ಹಲ್ಲೆ

ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಲಾಟೆ ನಡೆದು, ಕೆಲವು ಕಿಡಿಗೇಡಿಗಳು ನಾಲ್ವರ ಮೇಲೆ ಬ್ಲೇಡ್’ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

ಬ್ಲೇಡ್’ನಿಂದ ನಡೆದ ಹಲ್ಲೆಯಿಂದ ಗಾಯಗೊಂಡ ಚೇತನ ಹಡಪದ, ಪ್ರಸಾದ ಅಶೋಕ ಸಿಂದೂರೆ ಹಾಗೂ ವಿಕಾಸ ಸುಭಾಶ ಸುಣಗಾರ ಅವರನ್ನು ವಿಮ್ಸ್’ಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ.

ರಾಹುಲ ಈರಪ್ಪ ಪಾಟೀಲ ಎಂಬ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರತಿ ವರ್ಷದಂತೆ ಅದ್ಧೂರಿಯಾಗಿ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿತ್ತು.

ಕಿಡಿಗೇಡಿಗಳ ಕೃತ್ಯದಲ್ಲಿ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಕೆಲವರು ಆರೋಪಿಸಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version