ಆದಿತ್ಯನಾಥ್ ರನ್ನು ಪ್ರತಿಪಕ್ಷ ನಾಯಕನಾಗಿ ನೋಡಲು ಬಯಸುತ್ತೇನೆ: ರಾಕೇಶ್ ಟಿಕಾಯತ್

Prasthutha|

ಬಿಜ್ನೋರ್(ಉತ್ತರಪ್ರದೇಶ): ಉತ್ತರಪ್ರದೇಶ ಚುನಾವಣೆ ಬಳಿಕ ಯೋಗಿ ಆದಿತ್ಯನಾಥ್ ರನ್ನು ಪ್ರತಿಪಕ್ಷ ನಾಯಕನಾಗಿ ನೋಡಲು ಬಯಸುತ್ತೇನೆ ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕನು ಬಲಶಾಲಿಯಾಗಿರಬೇಕು. ಉತ್ತರಪ್ರದೇಶದಲ್ಲಿ ಆ ಸ್ಥಾನಕ್ಕೆ ಯೋಗಿಜಿ ಅವರಿಗಿಂತ ಸೂಕ್ತ ವ್ಯಕ್ತಿ ಇನ್ನೊಬ್ಬರಿಲ್ಲ. ಅವರನ್ನು ನಾನು ಚುನಾವಣೆಯ ನಂತರ ಪ್ರಬಲ ಪ್ರತಿಪಕ್ಷ ನಾಯಕನಾಗಿ ನೋಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.


ಟಿಕಾಯತ್ ಉತ್ತರಪ್ರದೇಶದ ಬಿಜ್ನೋರ್ ಜಿಲ್ಲೆಯ ಹಲವು ಗ್ರಾಮಗಳಿಗೆ ತೆರಳಿ ಬಿಜೆಪಿ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿಗೆ ಮತ ನೀಡಿ, ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಮತದಾರರಿಗೆ ಮನವಿ ಮಾಡಿದರು.

Join Whatsapp