ನಾಳೆಯಿಂದ ದ.ಕ.ಜಿಲ್ಲೆಯಾದ್ಯಂತ ರಮಝಾನ್ ಉಪವಾಸ

Prasthutha|

ಮಂಗಳೂರು: ಪವಿತ್ರ ರಮಝಾನ್ ತಿಂಗಳ ಚಂದ್ರದರ್ಶನವಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರದಿಂದ ಉಪವಾಸ ಆರಂಭವಾಗಲಿದೆ ಎಂದು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ.

- Advertisement -

ರಂಝಾನ್ ತಿಂಗಳ ಚಂದ್ರದರ್ಶನವಾಗಿದೆ ಹಾಗಾಗಿ ಗುರುವಾರ ಉಪವಾಸ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಿರ್ದೇಶಿಸಿದಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಖತೀಬರಾದ ಅಲ್‌ಹಾಜ್ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಉಸ್ತಾದರು ತಿಳಿಸಿರುತ್ತಾರೆ.

ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಗುರುವಾರ ಉಪವಾಸ ಆರಂಭಗೊಂಡಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಶುಕ್ರವಾರದಿಂದ ರಂಜಾನ್ ಉಪವಾಸ ಆರಂಭವಾಗಲಿದೆ. ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ಶುಕ್ರವಾರ ಪವಿತ್ರ ರಂಜಾನ್ ಉಪವಾಸ ಆರಂಭವಾಗಲಿದೆ ಎಂದು ಚಂದ್ರ ದರ್ಶನ ಸಮಿತಿ ತಿಳಿಸಿದೆ.

Join Whatsapp