ಪಾದಯಾತ್ರೆ ಮಾಡಿದ್ರೆ ಕಾನೂನು ಕ್ರಮ: ಡಿಕೆಶಿಗೆ ನೋಟಿಸ್ ನೀಡಿದ ರಾಮನಗರ ಎಸ್ಪಿ

Prasthutha|

ರಾಮನಗರ: ನಿಯಮ ಮೀರಿ ಪಾದಯಾತ್ರೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಮನಗರ ಜಿಲ್ಲಾ ಎಸ್ಪಿ ಗಿರೀಶ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗಿರೀಶ್, ಮೇಕೆದಾಟು ಪಾದಯಾತ್ರೆಗೆ ಅನುಮತಿ ನೀಡಲಾಗುವುದಿಲ್ಲ. ಕೆಪಿಸಿಸಿ ಅಧ್ಯಕ್ಷರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಪಾದಯಾತ್ರೆ ಮಾಡುವುದು ಕೊರೊನಾ ನಿಯಮಾವಳಿಗಳ ಪ್ರಕಾರ ತಪ್ಪು. ಒಂದು ವೇಳೆ ನಿಯಮ ಮೀರಿ ಪಾದಯಾತ್ರೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Join Whatsapp