ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ರಮಾನಾಥ ರೈ

Prasthutha|

- Advertisement -

ಮಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿರುವುದಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಘೋಷಿಸಿದ್ದಾರೆ.

ಈ ಬಗ್ಗೆ ಮಂಗಳವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ನನ್ನ ಕೊನೆಯ ಚುನಾವಣೆ. ನಾನು ಸೋತರೂ ಗೆದ್ದರೂ ಪಕ್ಷದ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತೇನೆ . ಜಿಲ್ಲೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾದರೂ ರಾಜ್ಯದಲ್ಲಿ ಸರ್ಕಾರ ರಚಿಸಿದ್ದೇವೆ. ಜನರಿಗಾಗಿ ಸದಾ ಕೆಲಸ ಮಾಡುತ್ತೇನೆ ಎಂದರು.

- Advertisement -

ಈ ಬಾರಿ ನನ್ನ ಸೋಲಿನ ಮತಗಳ ಅಂತರ ಕಡಿಮೆಯಾಗಿದೆ. ಗೆಲುವಿನ ವಿಶ್ವಾಸವಿತ್ತು. ಆದರೂ ಸೋಲಾಗಿದೆ. ಮುಂಬರುವ ಚುನಾವಣೆಯಲ್ಲಿ ಸಾರ್ವಜನಿಕರು ಕಾಂಗ್ರೆಸ್‌ ನ್ನು ಗೆಲ್ಲಿಸುತ್ತಾರೆ ಎಂಬ ನಂಬಿಕೆ ನಮಗಿದೆ. ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್’ಗೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಸಿಗುವ ವಿಶ್ವಾಸವಿದೆ” ಎಂದು ರೈ ಹೇಳಿದ್ದಾರೆ.

2024ರ ಲೋಕಸಭೆಗೆ ಸ್ಪರ್ಧಿಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷವು ಸರ್ವಶ್ರೇಷ್ಠವಾಗಿದ್ದು, ನಾನು ಪಕ್ಷಕ್ಕಿಂತ ದೊಡ್ಡವನಲ್ಲ, ಆದ್ದರಿಂದ ಪಕ್ಷ ಏನೇ ನಿರ್ಧರಿಸಿದರೂ ನಾನು ಅದನ್ನು ಪಾಲಿಸುತ್ತೇನೆ ಎಂದು ಹೇಳಿದ್ದಾರೆ



Join Whatsapp