ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖಾ ವರದಿ ಸಲ್ಲಿಸಲು ಎಸ್ ಐಟಿಗೆ ಹೈಕೋರ್ಟ್ ಸೂಚನೆ

Prasthutha|

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿ ಅಂತಿಮ ತನಿಖಾ ವರದಿ ಸಲ್ಲಿಸಲು ಎಸ್ಐಟಿಗೆ ಹೈಕೋರ್ಟ್ ಸೂಚನೆ ನೀಡಿದೆ.

- Advertisement -

ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಿದೆ. ಅಂತಿಮ‌ ವರದಿ ಸಲ್ಲಿಕೆಗೆ ಎಸ್ ಐಟಿ ಅವಕಾಶ ಕೋರಿತ್ತು. ಸದ್ಯ ಎಸ್​ ಐಟಿ ತನಿಖೆ ಪ್ರಶ್ನಿಸಿರುವ ಯುವತಿಯ ಅರ್ಜಿ ಬಗ್ಗೆ ಇಂದು ವಿಚಾರಣೆ ನಡಿಸಿದ ಕೋರ್ಟ್​ ತನಿಖಾ ವರದಿ ಸಲ್ಲಿಸಲು ಆಕ್ಷೇಪಣೆ ಏನೂ ಇಲ್ಲ ಎಂದು ತಿಳಿಸಿದೆ. 

ಲೈಂಗಿಕ ದೌರ್ಜನ್ಯ ಆರೋಪದಿಂದ ರಮೇಶ್ ಜಾರಕಿಹೊಳಿ‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯದಲ್ಲೇ ಅವರ ಭವಿಷ್ಯ ತೀರ್ಮಾನವಾಗಲಿದೆ. ಇದೀಗ ತನಿಖೆ ಮುಕ್ತಾಯವಾಗಿದ್ದು, ವರದಿ ಸಲ್ಲಿಕೆಯಾಗಲಿದೆ.

Join Whatsapp