Home ಟಾಪ್ ಸುದ್ದಿಗಳು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖಾ ವರದಿ ಸಲ್ಲಿಸಲು ಎಸ್ ಐಟಿಗೆ ಹೈಕೋರ್ಟ್ ಸೂಚನೆ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖಾ ವರದಿ ಸಲ್ಲಿಸಲು ಎಸ್ ಐಟಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿ ಅಂತಿಮ ತನಿಖಾ ವರದಿ ಸಲ್ಲಿಸಲು ಎಸ್ಐಟಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಿದೆ. ಅಂತಿಮ‌ ವರದಿ ಸಲ್ಲಿಕೆಗೆ ಎಸ್ ಐಟಿ ಅವಕಾಶ ಕೋರಿತ್ತು. ಸದ್ಯ ಎಸ್​ ಐಟಿ ತನಿಖೆ ಪ್ರಶ್ನಿಸಿರುವ ಯುವತಿಯ ಅರ್ಜಿ ಬಗ್ಗೆ ಇಂದು ವಿಚಾರಣೆ ನಡಿಸಿದ ಕೋರ್ಟ್​ ತನಿಖಾ ವರದಿ ಸಲ್ಲಿಸಲು ಆಕ್ಷೇಪಣೆ ಏನೂ ಇಲ್ಲ ಎಂದು ತಿಳಿಸಿದೆ. 

ಲೈಂಗಿಕ ದೌರ್ಜನ್ಯ ಆರೋಪದಿಂದ ರಮೇಶ್ ಜಾರಕಿಹೊಳಿ‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯದಲ್ಲೇ ಅವರ ಭವಿಷ್ಯ ತೀರ್ಮಾನವಾಗಲಿದೆ. ಇದೀಗ ತನಿಖೆ ಮುಕ್ತಾಯವಾಗಿದ್ದು, ವರದಿ ಸಲ್ಲಿಕೆಯಾಗಲಿದೆ.

Join Whatsapp
Exit mobile version