Home ಟಾಪ್ ಸುದ್ದಿಗಳು ತಮಿಳುನಾಡಿನವರಿಂದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​: ಶೋಭಾಗೆ ಹೈಕೋರ್ಟ್​ ಪ್ರಶ್ನೆ..!

ತಮಿಳುನಾಡಿನವರಿಂದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​: ಶೋಭಾಗೆ ಹೈಕೋರ್ಟ್​ ಪ್ರಶ್ನೆ..!

ಚೆನ್ನೈ: “ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವರು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದಾರೆ” ಎಂಬ ನಿಮ್ಮ ಹೇಳಿಕೆಗೆ ಏನು ಆಧಾರವಿದೆ ಎಂದು ಮದ್ರಾಸ್​​ ಹೈಕೋರ್ಟ್ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರು ಸಚಿವೆ​ ಶೋಭಾ ಕರಂದ್ಲಾಜೆ ಅವರಿಗೆ ಪ್ರಶ್ನಿಸಿದೆ.

ಬೆಂಗಳೂರಿನ ನಗರ್ತಪೇಟೆಯಲ್ಲಿ ಮೊಬೈಲ್​ ಅಂಗಡಿ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ಬಿಜೆಪಿ ಹಾಗೂ ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸಚಿವೆ ಶೋಭಾ ಕರಂದ್ಲಾಜೆ, “ತಮೀಳುನಾಡಿನಲ್ಲಿ ತರಬೇತಿ ಪಡೆಯುತ್ತಾರೆ, ಇಲ್ಲಿ (ಕರ್ನಾಟಕ)ಕ್ಕೆ ಬಂದು ಬಾಂಬ್​ ಇಡುತ್ತಾರೆ” ಎಂದು ಆರೋಪ ಮಾಡಿದ್ದರು.

ಈ ಹೇಳಿಕೆಯು ತಮಿಳುನಾಡಿನವರನ್ನು ಅವಮಾನಿಸುವಂತಹದ್ದು ಎಂಬ ಆಕ್ಷೇಪ ವ್ಯಕ್ತವಾಗಿತ್ತು. ಈ ಸಂಬಂಧ ಸಿ.ತ್ಯಾಗರಾಜನ್ ಎಂಬುವರು ಮಾರ್ಚ್ 20 ರಂದು ಮಧುರೈನ ಸೈಬರ್ ಕ್ರೈಂ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದರು. ಶೋಭಾ ಕರಂದ್ಲಾಜೆ ವಿರುದ್ಧ ಎಫ್​ಐಆರ್​​ ಬರೆಯಲಾಗಿದೆ. ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಶೋಭಾ ಕರಂದ್ಲಾಜೆ ಅವರು ಅರ್ಜಿ ಸಲ್ಲಿಸಿದರು.

ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಜಿ.ಜಯಚಂದ್ರನ್ ಬಾಂಬ್ ಇಟ್ಟವರು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದಾರೆ” ಎಂಬ ನಿಮ್ಮ ಹೇಳಿಕೆಗೆ ಏನು ಆಧಾರವಿದೆ ಎಂಬ ಪ್ರಶ್ನೆಯನ್ನು ಕೇಳಿದರು.

Join Whatsapp
Exit mobile version