Home ಟಾಪ್ ಸುದ್ದಿಗಳು ರಸಗುಲ್ಲಾಕ್ಕಾಗಿ ಮಾರಾಮಾರಿ: ಓರ್ವ ಸಾವು, ಕೆಲವರಿಗೆ ಗಾಯ

ರಸಗುಲ್ಲಾಕ್ಕಾಗಿ ಮಾರಾಮಾರಿ: ಓರ್ವ ಸಾವು, ಕೆಲವರಿಗೆ ಗಾಯ

ಆಗ್ರಾ: ರಸಗುಲ್ಲಾಕ್ಕಾಗಿ ನಡೆದ ಘರ್ಷಣೆಯಲ್ಲಿ 22 ವರ್ಷದ ಯುವಕನೋರ್ವ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ಏತ್ಮಾದಪುರದಲ್ಲಿ ನಡೆದಿದೆ.

ಮೃತನನ್ನು ಖಂಡೌಲಿಗೆ ಸೇರಿದ ಸನ್ನಿ ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ ನಡೆದ ಮೊಹಲ್ಲಾ ಶೈಖಾನ್ ನಿವಾಸಿ ಉಸ್ಮಾನ್ ಅವರ ಪುತ್ರಿಯ ವಿವಾಹ ಸಮಾರಂಭದಲ್ಲಿ ರಸಗುಲ್ಲ ಕೊರತೆಯಾದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ರಸಗುಲ್ಲ ಕೊರತೆ ಕುರಿತಂತೆ ವಧು ಹಾಗೂ ವರನ ಕಡೆಯವರ ನಡುವೆ ವಾಗ್ವಾದ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡಿದ್ದ ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಥಮ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಯಿತು.

ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Join Whatsapp
Exit mobile version