ಮುಂಬೈ | ಕಾಶ್ಮೀರ ಪಂಡಿತರಿಗೆ ಸಂಪೂರ್ಣ ರಕ್ಷಣೆ ನೀಡಲು ರಝಾ ಅಕಾಡೆಮಿ ಆಗ್ರಹ

Prasthutha|

ಮುಂಬೈ: ಕಾಶ್ಮೀರದ ಪಂಡಿತರಿಗೆ ಸಂಪೂರ್ಣ ರಕ್ಷಣೆ ನೀಡಲು ಮತ್ತು ವಲಸೆ ತಡೆಯಲು ಕ್ರಮ ಕೈಗೊಳ್ಳುವಂತೆ ಮುಂಬೈನ ರಝಾ ಅಕಾಡೆಮಿ ಸಂಸ್ಥೆ ಆಗ್ರಹಿಸಿದೆ.

- Advertisement -

ಕಾಶ್ಮೀರ ಪಂಡಿತರ ಹತ್ಯೆಯನ್ನು ಖಂಡಿಸಿ ಮುಂಬೈನಲ್ಲಿ ರಝಾ ಅಕಾಡೆಮಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪಂಡಿತರಿಗೆ ಭದ್ರತೆ ನೀಡುವಂತೆ ಆಗ್ರಹಿಸಿದೆ.

ಈ ಕುರಿತು ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಾಶ್ಮೀರ ಪಂಡಿತರಿಗೆ ಭದ್ರತೆ ಮತ್ತು ಅವರ ವಲಸೆಯನ್ನು ತಡೆಯಲು ಸೂಕ್ತ ಕ್ರಮ ಜರುಗಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದ್ದಾರೆ.

Join Whatsapp