Home ಟಾಪ್ ಸುದ್ದಿಗಳು RCB ಸೋಲಿಗೆ ಅಶ್ವಿನಿ ಕಾರಣ: ‘ಗಜಪಡೆ’ ಟ್ವಿಟರ್ ಅಕೌಂಟ್ ನಿಂದನೆ

RCB ಸೋಲಿಗೆ ಅಶ್ವಿನಿ ಕಾರಣ: ‘ಗಜಪಡೆ’ ಟ್ವಿಟರ್ ಅಕೌಂಟ್ ನಿಂದನೆ

ಬೆಂಗಳೂರು: ಆರ್​ಸಿಬಿ ತಂಡ ಈ ಬಾರಿಯ ಐಪಿಎಲ್​ ನಲ್ಲೂ ಮುಗ್ಗರಿಸುವ ಸೂಚನೆ ಸಿಕ್ಕಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋತು, ಒಂದು ಮ್ಯಾಚ್​ ಗೆದ್ದಿದೆ.

ಆರ್​ ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್​ ಕುಮಾರ್ ಕಾರಣ ಎಂದು ಅವಹೇಳನಕಾರಿಯಾಗಿ ಗಜಪಡೆ ಎಂಬ ಪೇಜ್ ಟ್ವೀಟ್ ಮಾಡಿದೆ.

ಆರ್​ಸಿಬಿ ಅನ್​ಬಾಕ್ಸಿಂಗ್ ಇವೆಂಟ್​ಗೆ ಅಶ್ವಿನಿ ಅವರು ಕೂಡ ತೆರಳಿದ್ದರು. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ. ಇದನ್ನು ಅನೇಕರು ಖಂಡಿಸಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನೂ ಕೆಲವರು ‘ದರ್ಶನ್ ಅವರು ಫ್ಯಾನ್ಸ್​ಗೆ ಬುದ್ಧಿವಾದ ಹೇಳಬೇಕು’ ಎಂದಿದ್ದಾರೆ.

ಈ ಟ್ವೀಟ್​ ನಿಂದ ಪುನೀತ್ ರಾಜಕುಮಾರ್ ಫ್ಯಾನ್ಸ್ ಸದ್ಯ ಕೋಪಗೊಂಡಿದ್ದಾರೆ. ಹೀಗಾಗಿ, ಕಾನೂನು ಕ್ರಮಕ್ಕೆ ಅಪ್ಪು ಅಭಿಮಾನಿಗಳು ಮುಂದಾಗಿದ್ದಾರೆ.

Join Whatsapp
Exit mobile version