ಶಿರವಸ್ತ್ರ-ಕೇಸರಿ ಶಾಲು ವಿವಾದದ ಮಧ್ಯಸ್ಥಿಕೆಗೆ ಸಿದ್ಧ: ಬಸವರಾಜ ಹೊರಟ್ಟಿ

Prasthutha|

ಹುಬ್ಬಳ್ಳಿ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದವು ತಾರಕಕ್ಕೇರಿದ್ದು ,ಇದರ ಬಗ್ಗೆ ಪರಿಹಾರ ಸೂಚಿಸಲು ರಾಜ್ಯ ಸರ್ಕಾರ ಸಭೆ ನಡೆಸಿದರೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ವಿಧಾನ ಪರಿಷತ್ ಸಭಾಪತಿ‌ ಬಸವರಾಜ ಹೊರಟ್ಟಿ ಹೇಳಿದರು.

- Advertisement -

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಿನ ಅಹಿತಕರ ವಾತಾವರಣವನ್ನು ತಿಳಿಗೊಳಿಸಲು ಸರ್ಕಾರ ಪೋಷಕರು, ವಿದ್ಯಾರ್ಥಿಗಳು, ಶೈಕ್ಷಣಿಕ ಸಂಸ್ಥೆಗಳು, ಮುಖ್ಯಮಂತ್ರಿ, ಗೃಹಸಚಿವ ಹಾಗೂ ಶಿಕ್ಷಣ ಸಚಿವರು ಪ್ರಯತ್ನಿಸಬೇಕು. ಸೌಹಾರ್ದ ಸಭೆ ನಡೆಸಿ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದರು.

ಇತ್ತೀಚಿನ ಅಹಿತಕರ ಘಟನೆಗಳನ್ನು ತಡೆಯಲು ರಾಜ್ಯ ಸರ್ಕಾರ ವಿಫಲವಾಗಿದ್ದು ಸಾಕಷ್ಟು ಅಹಿತಕರ ಘಟನೆಗಳು ನಡೆದರೂ ಸರ್ಕಾರ ಕೈಕಟ್ಟಿಕೊಂಡು ಕುಳಿತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.



Join Whatsapp