ಮಹಾರಾಷ್ಟ್ರದ ಒಂದಿಂಚು ಭೂಮಿಗಾಗಿಯೂ ಹೋರಾಟ ನಡೆಸಲು ಸಿದ್ಧ:  ದೇವೇಂದ್ರ ಫಡ್ನವೀಸ್

Prasthutha|

ಮುಂಬೈ: ಕರ್ನಾಟಕದೊಂದಿಗಿನ ಗಡಿ ವಿವಾದದ ನಡುವೆ, ಮಹಾರಾಷ್ಟ್ರ ಸರ್ಕಾರ ಒಂದು ಇಂಚು ಭೂಮಿಯನ್ನೂ ಕಳೆದುಕೊಳ್ಳುವುದಕ್ಕೆ ಇಷ್ಟಪಡುವುದಿಲ್ಲ. ಭೂಮಿಗಾಗಿ  ಹೋರಾಟಕ್ಕೂ ಸಿದ್ದ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

- Advertisement -

ಸೋಮವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿನ ಮರಾಠಿಗರಿಗೆ ನ್ಯಾಯ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಏನು ಬೇಕಾದರೂ ಮಾಡಲಿದೆ. ಅವರ ಹಿತಾಸಕ್ತಿ ಕಾಪಾಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.

ಇತ್ತ ಕರ್ನಾಟಕದ ಒಂದಿಂಚೂ ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ ಎಂದು ಕರ್ನಾಟಕ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ಣಯವನ್ನು ಅಂಗೀಕರಿಸಿದ ಬೆನ್ನಲ್ಲೇ ಫಡ್ನವೀಸ್ ಹೇಳಿಕೆ ಹೊರಬಂದಿದೆ.

- Advertisement -

ಸೋಮವಾರ ಇಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ವಿಷಯವು ಪ್ರತಿಧ್ವನಿಸಿತು. ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ನಿರ್ಣಯವನ್ನು ಕೈಗೊಳ್ಳಲು ಒತ್ತಾಯಿಸಿದವು.

Join Whatsapp