ಕರಾವಳಿಯಲ್ಲಿ ನಾಳೆ ‘ರೆಡ್‌ ಅಲರ್ಟ್‌’ ಘೋಷಣೆ

Prasthutha|

- Advertisement -

ಮಂಗಳೂರು: ಕರಾವಳಿ ಭಾಗದಲ್ಲಿ ಶನಿವಾರ ದಿನವಿಡೀ ಬಿರುಸಿನ ಮಳೆಯಾಗಿದ್ದು,ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜೂ.9 ರಂದು ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಿದೆ.

- Advertisement -

ಮೀನುಗಾರರು ಕಡಿಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಜೂ.10 ಮತ್ತು 11 ರಂದು ‘ಆರೆಂಜ್ ಅಲರ್ಟ್’ ಮತ್ತು ಜೂ.12 ರಂದು ‘ಎಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.



Join Whatsapp