‘ನಿಮ್ಮೊಳಗಿನ ವಿಷ ಅರಿಯದ ದಿನಗಳು’ : ವಿಶ್ವೇಶ್ವರ ಭಟ್‌ಗೆ ತಿರುಗೇಟು ನೀಡಿದ ಪ್ರಕಾಶ್ ರಾಜ್

Prasthutha|

ಬೆಂಗಳೂರು: ಹಿರಿಯ ನಟ ಪ್ರಕಾಶ್ ರಾಜ್ ತನ್ನೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಹಳೆಯ ಫೋಟೋಗಳನ್ನು ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್‌ ಶೇರ್ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್, “ಹೌದು, ನಿಮ್ಮೊಳಗಿನ ವಿಷ ಅರಿಯದ, ವಿಷಾದ ಪಡಲೇಬೇಕಾದ ದಿನಗಳು” ಎಂದು ಉತ್ತರ ನೀಡಿದ್ದಾರೆ.

- Advertisement -

‘ವಿಶ್ವವಾಣಿ’ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಭಾಗವಹಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ನಟ ಪ್ರಕಾಶ್ ರಾಜ್, ‘ಸನ್ಮಾನ್ಯ ಸಿದ್ದರಾಮಯ್ಯನವರೇ, ದಯವಿಟ್ಟು ಒಮ್ಮೆ ಯೋಚಿಸಿ. ಇದು ತಮಗೆ ಶೋಭೆಯಲ್ಲ’ ಎಂದು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಪೋಸ್ಟ್ ಹಾಕಿದ್ದ ವಿಶ್ವೇಶ್ವರ ಭಟ್‌, “ನೆನಪುಗಳು ಮಾಸುವುದಿಲ್ಲ. ನನ್ನ ಪುಸ್ತಕ ಬಿಡುಗಡೆಗೆ ಹೋಗಬೇಡಿ ಎನ್ನುವವರು, ನನ್ನೊಂದಿಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇಕೋ? ಡಬಲ್ ಸ್ಟ್ಯಾಂಡರ್ಡ್ ಅಂದ್ರೆ ಇದೇ ನೋಡಿ” ಎಂದು ಪ್ರಕಾಶ್ ರಾಜ್ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಹಳೆಯ ಫೋಟೋವನ್ನು ಪೋಸ್ಟ್ ಮಾಡಿದ್ದರು. ಇದಕ್ಕೆ ಉತ್ತರಿಸಿದ ಪ್ರಕಾಶ್ ರಾಜ್, “ಹೌದು, ನಿಮ್ಮೊಳಗಿನ ವಿಷ ಅರಿಯದ, ವಿಷಾದ ಪಡಲೇಬೇಕಾದ ದಿನಗಳು” ಎಂದು ಉತ್ತರ ನೀಡಿದ್ದಾರೆ.

- Advertisement -

ಬೆಂಗಳೂರಿನ ಕೆ ಪಿ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಜು.22ರಂದು ವಿಶ್ವೇಶ್ವರ ಭಟ್ ಅವರ ‘ಸಂಪಾದಕರ ಸದ್ಯಶೋಧನೆ’ ಎಂಬ ಹೆಸರಿನ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದ್ದು, ‘ದ್ವೇಷ ಹರಡುವ ಪತ್ರಕರ್ತರೊಬ್ಬರ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಬಾರದು” ಎಂದು ಹಲವರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

Join Whatsapp