ವೃದ್ಧೆಯನ್ನು ಜೋಳಿಗೆಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಸಂಬಂಧಿಕರು

Prasthutha|

ಚಿಕ್ಕಮಗಳೂರು: ಮನೆ ಬಾಗಿಲಿಗೆ ವಾಹನಗಳು ಬರಲು ಸುವ್ಯವಸ್ಥಿತ ದಾರಿಯಿಲ್ಲದ ಕಾರಣ ವೃದ್ಧೆಯೊಬ್ಬರನ್ನು ಸಂಬಂಧಿಕರು ಜೋಳಿಗೆಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಘಟನೆ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ.

- Advertisement -

85 ವರ್ಷದ ವೃದ್ಧೆ ವೆಂಕಮ್ಮರನ್ನು ಮನೆಯಿಂದ ಜಮೀನಿನ ಕಾಲುದಾರಿಯಲ್ಲಿ ಹೊತ್ತೊಯ್ದ ಸಂಬಂಧಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಮೀನೊಂದರ  ಮಧ್ಯದಲ್ಲಿ ವೆಂಕಮ್ಮ ಅವರ  ಮನೆಯಿರುವ ಕಾರಣ 2021ರಲ್ಲಿಯೇ ರಸ್ತೆ ಮಾಡಿಸಿಕೊಡಿ ಎಂದು ಸಚಿವ ಆರ್ ಆಶೋಕ್ ಮತ್ತು ಜಿಲ್ಲಾಧಿಕಾರಿಗಳಿಗೆ ವೆಂಕಮ್ಮ ಮನವಿ ಮಾಡಿದ್ದರು.

ಈ ಜಮೀನು ಭೂ ಸ್ವಾಧೀನ ಕಾಯ್ದೆ ಅಡಿಯಲ್ಲಿ ಮಂಜೂರಾಗಿದ್ದು, ಇಲ್ಲಿನ ಆದಿವಾಸಿ ಕುಟುಂಬಗಳು ಕಾಲು ದಾರಿಯಲ್ಲೇ ಓಡಾಡುತ್ತಿದ್ದಾರೆ. ಸರ್ಕಾರ ಮತ್ತು ಜಿಲ್ಲಾಡಳಿತದ ಅಸಡ್ಡೆಯ ವಿರುದ್ದ ಸ್ಥಳೀಯರು ಅಸಮಾಧಾನಗೊಂಡಿದ್ದಾರೆ.

Join Whatsapp