Home ಟಾಪ್ ಸುದ್ದಿಗಳು ಸಾರ್ವಜನಿಕ ಸ್ಥಳಗಳಲ್ಲಿರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡಬೇಕು: ಸುಪ್ರೀಂ ಕೋರ್ಟ್

ಸಾರ್ವಜನಿಕ ಸ್ಥಳಗಳಲ್ಲಿರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡಬೇಕು: ಸುಪ್ರೀಂ ಕೋರ್ಟ್

►’ನಮ್ಮದು ಜಾತ್ಯತೀತ ರಾಷ್ಟ್ರ, ಆದೇಶ ಎಲ್ಲಾ ನಾಗರಿಕರಿಗೂ ಅನ್ವಯವಾಗುತ್ತವೆ


ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.


ಕೋರ್ಟ್ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿ ಧ್ವಂಸಕ್ಕೆ ಆಧಾರವಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.


ನಮ್ಮದು ಜಾತ್ಯತೀತ ರಾಷ್ಟ್ರ. ಇಲ್ಲಿ ನ್ಯಾಯಾಲಯ ಹೊರಡಿಸುವ ಆದೇಶ ಎಲ್ಲಾ ನಾಗರಿಕರಿಗೂ, ಸಂಸ್ಥೆಗಳಿಗೂ ಅನ್ವಯವಾಗುತ್ತವೆ ಹೊರತು ನಿರ್ದಿಷ್ಟ ಸಮುದಾಯಕ್ಕೆ ಅಲ್ಲ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.


ಒಂದು ನಿರ್ದಿಷ್ಟ ಧರ್ಮಕ್ಕೆ ವಿಭಿನ್ನ ಕಾನೂನು ಇರಬಾರದು ಎಂದು ಗಮನಿಸಿದ ನ್ಯಾಯಪೀಠ, ಸಾರ್ವಜನಿಕ ರಸ್ತೆಗಳು, ಸರ್ಕಾರಿ ಭೂಮಿ ಅಥವಾ ಅರಣ್ಯಗಳಲ್ಲಿ ಯಾವುದೇ ಅನಧಿಕೃತ ನಿರ್ಮಾಣಗಳು ತಲೆಯೆತ್ತುವಂತಿಲ್ಲ ಮತ್ತು ಅವುಗಳನ್ನು ರಕ್ಷಿಸಲೂಬಾರದು ಎಂದು ಹೇಳಿದೆ.

Join Whatsapp
Exit mobile version