ದತ್ತಪೀಠದಲ್ಲಿ ನಿರ್ಮಾಣ ಮಾಡಿರುವ ಗೋರಿಗಳನ್ನು ಸ್ಥಳಾಂತರ ಮಾಡಿ: ಸುನಿಲ್ ಕುಮಾರ್

Prasthutha|

ಚಿಕ್ಕಮಗಳೂರು: ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣ ಮಾಡಿರುವ ಗೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡಿ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ.

- Advertisement -

ದತ್ತಪೀಠಕ್ಕೆ ಇಂದು ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ದತ್ತಾತ್ರೇಯ ಪೀಠ ಬೇರೆ, ನಾಗೇನಹಳ್ಳಿಯಲ್ಲಿರುವ ಬಾಬಾಬುಡನ್ ದರ್ಗಾ ಬೇರೆ. ಈ ವಿಚಾರ ದಾಖಲೆಗಳಲ್ಲಿ ಸಾಬೀತಾಗಿದೆ. ದತ್ತಪೀಠದಲ್ಲಿ ಹಿಂದುಗಳ ಮೂಲಕವೇ ಪೂಜೆಯಾಗಬೇಕು ಎಂದು ನ್ಯಾಯಾಲಯ ಇತ್ತೀಚೆಗೆ ನಿರ್ದೇಶನ ಕೊಟ್ಟಿದೆ. ಮುಸಲ್ಮಾನರು ಕಣ್ಣು ತೆರೆದು ನೋಡಬೇಕು ಎಂದು ಹೇಳಿದ್ದಾರೆ.

Join Whatsapp