ರೇಣುಕಾ ಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡ ಜೈಲು ಪಾಲು

Prasthutha|

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಇದ್ದ ನಟಿ ಪವಿತ್ರಾ ಗೌಡ ಜೈಲು ಪಾಲು ಆಗಿದ್ದಾರೆ.

- Advertisement -


ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು (ಜೂನ್ 20) ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯಬೇಕಿದೆ. ಈ ಪ್ರಕರಣದಲ್ಲಿ ಅವರು ಎ1 ಆಗಿರುವ ಕಾರಣ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ದರ್ಶನ್, ವಿನಯ್ ಮುಂತಾದವರು ಕೂಡ ಈ ಕೇಸ್ ನಲ್ಲಿ ಆರೋಪಿಗಳಾಗಿದ್ದಾರೆ.


ತನಿಖೆ ಇನ್ನೂ ಬಾಕಿ ಇರುವ ಕಾರಣದಿಂದ ದರ್ಶನ್, ವಿನಯ್, ಪ್ರದೋಶ್, ನಾಗರಾಜ್, ಲಕ್ಷ್ಮಣ್ ಹಾಗೂ ಧನರಾಜ್ ನನ್ನು 4 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಲಾಗಿದೆ.



Join Whatsapp