ಬಿಜೆಪಿ ಭಿನ್ನಮತ | ಹೈಕಮಾಂಡ್ ಗೆ ಪತ್ರ ಬರೆದ ಈಶ್ವರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೇಣುಕಾಚಾರ್ಯ

Prasthutha|

ಬೆಂಗಳೂರು : ಈಶ್ವರಪ್ಪನವರಂತಹ ಹಿರಿಯ ಸಚಿವರೇ ಮುಖ್ಯಮಂತ್ರಿಗಳ ವಿರುದ್ದ ಪತ್ರ ಬರೆಯುತ್ತಾರೆ ಎಂದರೆ ಹೇಗೆ? ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಇದನ್ನು ಬಗೆ ಹರಿಸಿಕೊಳ್ಳಬೇಕಿತ್ತು ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

- Advertisement -

 “ಈಗ ಉಪ-ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಹೀಗೆ ಮಾಡಿರುವುದರಿಂದ ಚುನಾವಣೆ ಮೇಲೆ ಪರಿಣಾಮ ಬೀರಲ್ವಾ? ಪಕ್ಷದ ಇಮೇಜ್ ಹಾಳಾಗುವುದಿಲ್ವಾ..? ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಶ್ವರಪ್ಪರಿಗೆ ಪ್ರಶ್ನಿಸಿದ್ದಾರೆ.

ನಾವು 60 ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿರುವುದರಿಂದ ಅವರು ಬಿಡುಗಡೆ ಮಾಡಿದ್ದಾರೆ ಅದರಲ್ಲಿ ತಪ್ಪೇನು? ಈ ಮೊದಲು ಈಶ್ವರಪ್ಪನವರಿಗೂ ಭೇಟಿ ಮಾಡಿ ನಾವು ಮನವಿ ಮಾಡಿದ್ದೆವು. ಆದರೆ ಅವರು ಸ್ಪಂದಿಸಿರಲಿಲ್ಲ. ಹಾಗಾಗಿ ವಿಧಿಯಿಲ್ಲದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕಾಯ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp