‘ಈಗಲೂ ಯಡಿಯೂರಪ್ಪನವರೇ ನಮ್ಮ ನಾಯಕ’: ಶಾಸಕ ಎಂಪಿ ರೇಣುಕಾಚಾರ್ಯ

Prasthutha|

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡರೂ ಯಡಿಯೂರಪ್ಪ ಅವರೇ ನಮ್ಮ ನಾಯಕರು ಎಂದು ಹೊನ್ನಳ್ಳಿ ಶಾಸಕ ಎಂಪಿ.ರೇಣುಕಾಚಾರ್ಯ ಹೇಳಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜಿಲ್ಲೆಗೆ ಒಂದು ಸಚಿವ ಸ್ಥಾನ ಕೇಳಿದ್ದೇವೆ. ಮಧ್ಯಕರ್ನಾಟಕಕ್ಕೆ ಈ ಬಾರಿಯಾದ್ರೂ ಅವಕಾಶ ಕೊಡಿ ಎಂಬುದಾಗಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ತಿಳಿಸಿದರು.

ನನಗೆ ಯಾವ ಖಾತೆ ಕೊಟ್ಟರು ನಿಭಾಯಿಸುತ್ತೇನೆ. ಆದ್ರೇ ಕೂಸು ಹುಟ್ಟೋ ಮೊದಲೇ ಕುಲಾವಿ ಹೊಲಿಸಿದ್ರು ಅಂತ ಆ ಬಗ್ಗೆ ಈಗ ಮಾತನಾಡೋದಿಲ್ಲ. ಇದೇ ಖಾತೆ ಕೊಡಿ ಅಂತ ಕೇಳುವುದು ಇಲ್ಲ ಎಂದು ಹೇಳಿದ್ದಾರೆ.

- Advertisement -

ನಾನು ಯಡಿಯೂರಪ್ಪ ನೆರಳಿನಲ್ಲೇ ಬೆಳೆದವನು. ಬಿಎಸ್ ಯಡಿಯೂರಪ್ಪ ಎಲ್ಲೋ ಇದ್ದ ನನ್ನನ್ನು ಇಷ್ಟು ಎತ್ತರಕ್ಕೆ ಬೆಳೆಸಿದ್ದಾರೆ. ನಾನು ಎದೆ ಮುಟ್ಟಿ ಹೇಳಿಕೊಳ್ಳುತ್ತೇನೆ. ಸಿಎಂ ಆಗಿ ಬಸವರಾಜ ಬೊಮ್ಮೊಯಿ ಇದ್ದರೂ, ನಮ್ಮ ನಾಯಕ ಯಡಿಯೂರಪ್ಪ ಎಂದು ತಿಳಿಸಿದರು.

Join Whatsapp