ನಾಟಕವಾಡುವುದನ್ನು ಬಿಟ್ಟು ತಾಕತ್ತಿದ್ರೆ ಆರೋಪ ಸಾಬೀತು ಮಾಡಿ: ಯತ್ನಾಳ್ ಗೆ ರೇಣುಕಾಚಾರ್ಯ ಸವಾಲ್

Prasthutha|

ಸದಾ ಮುಖ್ಯಮಂತ್ರಿ ವಿರುದ್ಧ ಕಿಡಿಕಾರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಿಡಿದೆದ್ದ ರೇಣುಕಾಚಾರ್ಯ ‘ನೀವು ನಾಟಕ ಮಾಡೋದು ಬಿಟ್ಟು, ನಿಮಗೆ ತಾಕತ್ತಿದ್ರೆ ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಭ್ರಷ್ಟಾಚಾರದ ಆರೋಪ ದಾಖಲೆ ಬಿಡುಗಡೆ ಮಾಡಿ’ ಎಂದು ಸವಾಲು ಹಾಕಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ ಅವರು ‘ ನಿಮ್ಮ ಬಳಿ ಯಾವ ದಾಖಲೆ ಇಟ್ಟುಕೊಂಡು ಮುಖ್ಯಮಂತ್ರಿ ಹಾಗೂ ಅವರ ಕುಟುಂಬದ ವಿರುದ್ಧ ಆರೋಪ ಮಾಡುತ್ತಿದ್ದೀರಿ. ವಾಜಪೇಯಿ ಸಂಪುಟದಲ್ಲಿ ಸಚಿವನಾಗಿದ್ದೆ ಅನ್ನೋದೇ ನಿಮ್ಮ ಬಂಡವಾಳ. ಈ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವರಾದ ಜಗದೀಶ್ ಶೆಟ್ಟರ್ ವಿರುದ್ಧವೂ ಮಾತಾಡಿದ್ದೀರಿ. ಈಗ ಮುಖ್ಯಮಂತ್ರಿ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದೀರಿ. ಶಾಸಕಾಂಗ ಪಕ್ಷದ ಸಭೆ ಕರೆದು ಯತ್ನಾಳ್ ಅವರನ್ನು ಉಚ್ಚಾಟನೆ ಮಾಡುವಂತೆ ಯಡಿಯೂರಪ್ಪ ಅವರಿಗೆ ನಾನು ಒತ್ತಾಯಿಸುತ್ತೇನೆ ಎಂದು ಗುಡುಗಿದ್ದಾರೆ.

Join Whatsapp