ಬಿಜೆಪಿಗರಿಂದಲೇ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ..!

Prasthutha|

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಸೋಮವಾರ ರಾತ್ರಿ 10.30 ರ ಸುಮಾರಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕ ಪ್ರಜ್ವಲ್ ಮೇಲೆ ಸ್ವಪಕ್ಷ ಬಿಜೆಪಿಯವರೇ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

- Advertisement -


ಹೊನ್ನಾಳಿ ಕ್ಷೇತ್ರದ ಗಾಯಗೊಂಡ ಪ್ರಜ್ವಲ್ ಅವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವ ಪ್ರಜ್ವಲ್ ರನ್ನು ಶಾಸಕ ಎಂಪಿ ರೇಣುಕಾಚಾರ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಈ ಕೂಡಲೇ ಹಲ್ಲೆಕೋರರನ್ನು ಬಂಧಿಸುವಂತೆ ಹೊನ್ನಾಳಿ ಪೊಲೀಸರನ್ನು ಕೋರಿದ್ದಾರೆ.

Join Whatsapp