ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ: ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

Prasthutha|

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಪೊಲೀಸರು ಸುಮಾರು ನಾಲ್ಕು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

- Advertisement -


ಇಂದು (ಸೆಪ್ಟೆಂಬರ್ 4) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಒಂದು ಪ್ರಮುಖ ಬೆಳವಣಿಗೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಇದು ದರ್ಶನ್ ಫ್ಯಾನ್ಸ್ ಗೆ ಕೊಂಚ ರಿಲೀಫ್ ನೀಡಿದೆ.


ಈ ಮೊದಲು ಎಫ್ ಐಆರ್ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು.

- Advertisement -


ಇದನ್ನು ಚಾರ್ಜ್ ಶೀಟ್ ನಲ್ಲಿ ಬದಲಿಸಬಹುದು ಎಂದು ಊಹಿಸಲಾಗಿತ್ತು. ದರ್ಶನ್ ಎ1 ಹಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಎಸಿಪಿ ಚಂದನ್ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ. ಇದರಿಂದ ಪವಿತ್ರಾ ಅವರು ಎ1 ಆರೋಪಿ ಆಗಿ ಮುಂದುವರಿದಿದ್ದಾರೆ.



Join Whatsapp
Exit mobile version