ಕಡಬ | ಪತ್ರಕರ್ತ ಖಾದರ್ ಸಾಹೇಬ್ ನಿಧನ

Prasthutha|

ಕಡಬ : ‘ಸುದ್ದಿ ಬಿಡುಗಡೆ’ ಪತ್ರಿಕೆಯ ಕಡಬ ವರದಿಗಾರರಾಗಿದ್ದ ಖಾದರ್ ಸಾಹೇಬ್ ಕಲ್ಲಗುಡ್ಡೆ ಅವರು ಅಲ್ಪಕಾಲಿಕ ಅಸೌಖ್ಯದಿಂದ ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ.

- Advertisement -

‘ಸುದ್ದಿ ಬಿಡುಗಡೆ’ ಪತ್ರಿಕೆಯಲ್ಲಿ ಹಲವು ವರ್ಷಗಳಿಂದ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೂ ಜನಪ್ರಿಯರಾಗಿದ್ದರು.

ಕಳೆದ ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

Join Whatsapp