Home Uncategorized ಫ್ಯಾಸಿಸ್ಟ್ ದುರಾಡಳಿತ ದೇಶವನ್ನು ನುಂಗುತ್ತಿದೆ : ಕ್ಯಾಂಪಸ್ ಫ್ರಂಟ್

ಫ್ಯಾಸಿಸ್ಟ್ ದುರಾಡಳಿತ ದೇಶವನ್ನು ನುಂಗುತ್ತಿದೆ : ಕ್ಯಾಂಪಸ್ ಫ್ರಂಟ್

ಮಂಗಳೂರು : ದೇಶಾದ್ಯಂತ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾವೂರು ಪ್ರದೇಶ ವತಿಯಿಂದ ಜೋಕಟ್ಟೆಯಿಂದ ಕೆ.ಬಿ.ಎಸ್ ತನಕ ಜಾಥಾ ಹಾಗೂ ಕೆ.ಬಿ.ಎಸ್ ಜಂಕ್ಷನ್‌ ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಪ್ರದೇಶ ಅಧ್ಯಕ್ಷ ಝಿಯಾದ್ ಜೋಕಟ್ಟೆ ಜಾಥಾಕ್ಕೆ ಚಾಲನೆ ನೀಡಿ ಧ್ವಜಾರೋಹಣಗೈದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕ್ಯಾಂಪಸ್ ಫ್ರಂಟ್ ಜಿಲ್ಲಾ ಉಪಾಧ್ಯಕ್ಷರಾದ ಅರ್ಫೀದ್ ಅಡ್ಕಾರ್ ಮಾತನಾಡಿ, ಇಂದು ದೇಶ ಕಂಡರಿಯದ ರೈತರ ಹೋರಾಟಕ್ಕೆ ದೇಶ ಸಾಕ್ಷಿಯಾಗಿದೆ, ಫ್ಯಾಸಿಸ್ಟ್ ಸರಕಾರದ ಆಡಳಿತದಲ್ಲಿ ಪ್ರತೀ ವರ್ಗದ ಜನರು ಇಂದು ಬೀದಿಯಲ್ಲಿದ್ದಾರೆ. ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ಇದೀಗ ಅನ್ನದಾತರು ಕೂಡ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುವಂತಹ ದುರಾಡಳಿತ ದೇಶದಲ್ಲಿ ನಡೆಯುತ್ತಿದೆ ಎಂದರು.

ಕ್ಯಾಂಪಸ್ ಫ್ರಂಟ್ ಸದಸ್ಯರಾದ ಸಾಹಿಲ್ ಜೋಕಟ್ಟೆ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯ ನಬೀಲ್ ಮೂಡಬಿದ್ರೆ ಉಪಸ್ಥಿತರಿದ್ದರು. ಕ್ಯಾಂಪಸ್ ಫ್ರಂಟ್ ಜಿಲ್ಲಾ ಕೋಶಾಧಿಕಾರಿ ಸರ್ಫರಾಝ್ ಅಂಗರಗುಂಡಿ ಕಾರ್ಯಕ್ರಮ ನಿರೂಪಿಸದರು.

Join Whatsapp
Exit mobile version