ಗಣರಾಜ್ಯೋತ್ಸವಕ್ಕೆ ಹುಸಿ ಬಾಂಬ್ ಬೆದರಿಕೆ: ನಾಲ್ವರು ಆರೋಪಿಗಳ ಬಂಧನ

Prasthutha|

ಅಹಮದಾಬಾದ್: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಅಹಮದಾಬಾದ್ ರೈಲು ನಿಲ್ದಾಣ ಮತ್ತು ಗೀತಾ ಮಂದಿರ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ನಾಲ್ವರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಆರೋಪಿಗಳು ಬೆದರಿಕೆ ಪತ್ರವನ್ನು ಅಹಮದಾಬಾದ್ ಪೊಲೀಸ್ ಕಮಿಷನರ್ ಕಚೇರಿಗೆ ಕಳುಹಿಸಿದ್ದರು. ಬೆದರಿಕೆ ಪತ್ರದಲ್ಲಿ ಅಹಮದಾಬಾದ್ ರೈಲು ನಿಲ್ದಾಣ ಮತ್ತು ಗೀತಾ ಮಂದಿರ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಬಗ್ಗೆ ಉಲ್ಲೇಖಿಸಿದ್ದರು. ಆರೋಪಿಗಳ ಪತ್ತೆಗೆ ಅಹಮದಾಬಾದ್ ಅಪರಾಧ ವಿಭಾಗ ಕಾರ್ಯಾಚರಣೆ ನಡೆಸಿತ್ತು ಎಂದು ಅಪರಾಧ ವಿಭಾಗದ ಡಿಸಿಪಿ ಚೈತನ್ಯ ಮಾಂಡ್ಲಿಕ್ ತಿಳಿಸಿದ್ದಾರೆ.. ಆರೋಪಿಗಳಲ್ಲಿ ಇಬ್ಬರನ್ನು ಅಹಮದಾಬಾದ್‌ನಲ್ಲಿ ಬಂಧಿಸಲಾದರೆ, ಮತ್ತಿಬ್ಬರನ್ನು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಬಂಧಿಸಲಾಗಿದೆ ಎಂದು ಡಿಸಿಪಿ ಮಾಂಡ್ಲಿಕ್ ಚೈತನ್ಯ ಮಾಹಿತಿ ನೀಡಿದ್ದಾರೆ.

Join Whatsapp