ಗಣರಾಜ್ಯೋತ್ಸವ ಪರೇಡ್| ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿರುವ ಮಂಗಳೂರಿನ ದಿಶಾ

Prasthutha|

ಮಂಗಳೂರು: ಜ.26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ನೌಕಾಪಡೆಯ 144 ಸೈನಿಕರನ್ನು ಒಳಗೊಂಡ ತುಕಡಿಯನ್ನು ಮಂಗಳೂರಿನ ತಿಲಕನಗರದ ದಿಶಾ ಅಮೃತ್‌ ಮುನ್ನಡೆಸಲಿದ್ದಾರೆ.

- Advertisement -

ಅಂಡಮಾನ್‌ ನಿಕೋಬಾರ್‌ನಲ್ಲಿ ನೌಕಾಪಡೆಯಲ್ಲಿ ಲೆಫ್ಟಿನೆಂಟ್‌ ಕಮಾಂಡರ್‌ ಆಗಿರುವ ದಿಶಾ ಗಣರಾಜ್ಯೋತ್ಸವ ಪರೇಡ್‌ನಲ್ಲಿ ತುಕಡಿಯ ನಾಯಕಿಯಾಗಿ ಹೆಜ್ಜೆಹಾಕಲಿದ್ದಾರೆ.

ದಿಶಾ ಮಂಗಳೂರಿನ ಅಮೃತ್ ಕುಮಾರ್‌– ಲೀಲಾ ದಂಪತಿಯ ಪುತ್ರಿಯಾಗಿದ್ದಾರೆ. ಅವರು ನಗರದ ಕೆನರಾ ವಿದ್ಯಾಸಂಸ್ಥೆಯಲ್ಲಿ ಒಂದನೇ ತರಗತಿಯಿಂದ ಪಿಯುಸಿ ವರೆಗೆ ವಿದ್ಯಭ್ಯಾಸ ಪಡೆದಿದ್ದಾರೆ. ಬೆಂಗಳೂರು ಬಸವನಗುಡಿಯ ಬಿಎಂಎಸ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಕಂಪ್ಯೂಟರ್‌ ಸೈನ್ಸ್‌ನಲ್ಲಿ ಬಿ.ಇ ಪದವಿ ಪಡೆದಿದ್ದಾರೆ.

Join Whatsapp